ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಟಿ.ಎಂ.ಇ.ಐ.ಸಿ ಇಂಡಸ್ಟ್ರಿಯಲ್ ಸಿಸ್ಟಮ್ಸ್ ವತಿಯಿಂದ ಮುಖ್ಯಮಂತ್ರಿಗಳ ಪ್ರವಾಹ ಪರಿಹಾರ ನಿಧಿಗೆ ನೀಡಲಾದ 19 ಲಕ್ಷ ರೂಪಾಯಿ ದೇಣಿಗೆಯನ್ನು ಸ್ವೀಕರಿಸಿದರು.
ಸಂಸ್ಥೆಯ ಕೈಗಾರಿಕಾ ಸಂಪರ್ಕ ವಿಭಾಗದ ಮುಖ್ಯಸ್ಥ ಹೆಚ್.ಎಸ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೇಂದ್ರದಿಂದ ಅನುಮೋದನೆಗೆ ಬಾಕಿ ಇರುವ ಹೆದ್ದಾರಿ ಕೆಲಸಗಳ ಬಗ್ಗೆ ಹಾಗೂ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಡಿಸೆಂಬರ್ 10 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೇವಾಡಿಗ ನವೋದಯ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ, 'ವಿದ್ಯಾನಿಧಿ ಮತ್ತು ದೇವಾಡಿಗ ಗ್ಲೋಬಲ್ ಎಜುಕೇಶನ್ ಫೌಂಡೇಶನ್' ಅನ್ನು ಉದ್ಘಾಟಿಸಿದರು.
ವಸತಿ ಸಚಿವ ವಿ. ಸೋಮಣ್ಣ, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ, ಜಯಪ್ರಕಾಶ್ ಹೆಗಡೆ, ದೇವಾಡಿಗ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment