ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಗೋಲೀಬಾರ್ ನಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರನ್ನು ಶನಿವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.
ಬಳಿಕ ಮುಖ್ಯಮಂತ್ರಿಗಳು, ವಿವಿಧ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅಹವಾಲು ಆಲಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರೂ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲು, ಶಾಸಕರಾದ ಯು ಟಿ ಖಾದರ್, ವೇದವ್ಯಾಸ ಕಾಮತ್, ಬಿ ಎಂ ಫಾರೂಕ್, ಐವನ್ ಡಿಸೋಜಾ , ರಾಜೇಶ್ ನಾಯಕ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ ಆರ್ ಲೋಬೋ, ಸೆಂಟ್ರಲ್ ಮುಸ್ಲಿಂ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಉಪಸ್ಥಿತರಿದ್ದರು.
No comments:
Post a Comment